Monday 13 February 2017

ಕನ್ನಡದ ಕಾವ್ಯ ಪರಂಪರಯನ್ನು ಕಾಲೇಜ ವಿಧ್ಯಾರ್ಥಿಗಳ ಮುಂದೆ ಬಿಚ್ಚಿಡುವ ಪ್ರಯತ್ನವೇ ಸಮುದಾಯದ ಕಾವ್ಯ ರಂಗ ತಿರುಗಾಟ





 ಯುವಕರದನಿ ಇಂದು ಕರ್ಕಶವಾಗುತ್ತಿರುವ ಹೊತ್ತಿನಲ್ಲಿ ಅವರ ದೇಹಕ್ಕೆ ಕಾವ್ಯದ ಸಾಹಚರ್ಯ ಒದಗಿಸುವ ಸಾಮಾಜಿಕ ಉದ್ದೇಶದಿಂದ ಶಾಸನ ಪದ್ಯಗಳಿಂದ ಹಿಡಿದು ಇದುವರೆಗಿನ ಕಾವ್ಯ ಕಥನಗಳ ಆಯ್ದ ಬರಹಗಳ ತುಣುಕನ್ನು ಸಂಬಂಧಗಳ ಪರಿಕಲ್ಪನೆಯಾಧಾರದಲ್ಲಿ ಹೆಣೆದು ಕಾವ್ಯರಂಗ ರೂಪಕವಾಗಿಸಲಾಗಿದೆ. ಕನ್ನಡದ ಲೋಕಗೃಹಿಕೆ, ಕನ್ನಡದ ವಿವೇಕ ಇವನ್ನು ಇಂದಿನ ಯುವಕರಿಗಾಗಿ ಮರುನಿರೂಪಿಸುವ ಒಂದು ಪ್ರಯತ್ನ ಭಾಗವಾಗಿ ಸಮುದಾಯದ ನಟ ನಟಿಯರು ಈ ಕಾವ್ಯಗಳನ್ನು ಆಡುತ್ತಾರೆ, ಹಾಡುತ್ತಾರೆ,ಕೆಲವನ್ನು ಅಭಿನುಸುತ್ತಾರೆ.  ಒಂದೂವರೆಗಂಟೆ ಕಾಲ ಸುಮಾರು 31 ಸಾಹಿತ್ಯಿಕ ಬರಹವನ್ನು ಇಲ್ಲಿ ರಂಗಕ್ಕೆತರಲಾಗಿದೆ. ಸಾಹಿತ್ಯ ಕಥನಗಳ ರಂಗ ಓದು ಇದು. ವಿದ್ಯಾರ್ಥಿಗಳಿಗೂ, ಅಧ್ಯಾಪಕರಿಗೂ ಅನುಕೂಲವಾಗುವುದೆಂಬ ಶೈಕ್ಷಣಿಕ ಉದ್ದೇಶವಿದೆ.
     ಹಣತೆ ಹಚ್ಚುತ್ತೆವೆ ನಾವು ಕತ್ತಲನ್ನು ಗೆಲ್ಲುತ್ತೆನೆಂಬ ಜಿದ್ದಿನಿಂದಲ್ಲ ಇರುವಷ್ಟು ಹೊತ್ತು ನಿಮ್ಮ ಮುಖ ನಾವು ನನ್ನ ಮುಖ ನೀವು ನೋಡಬಹುದೆಂಬ ಆಶೆಯಿಂದ ಎಂಬ ಜಿಎಸ್‍ಎಸ್ ರ ಪದ್ಯದಿಂದ ಆರಂಬವಾಗುವ ಈ ಕಾವ್ಯರಂಗ ಕನ್ನಡ ನಾಡು ರೂಪಿಸಿಕೊಂಡ ಬಂದ ಸಂಬಂದಗಳ ಜಾಲವನ್ನು ಹೆಣೆಯುವ ಕೆಲವು ನುಡಿಗಳನ್ನು ಕವಿರಾಜ ಮಾರ್ಗದಿಂದ ಮತ್ತು ದೂರದ ಬನವಾಸಿ ಕುರಿತು ಪಂಪನು ಹೇಳುವ ಚಾಗದ ಭೋಗದ ಸಾಲುಗಳನ್ನು ಒಳಗೊಂಡು  ಮನುಷ್ಯರಲ್ಲಿರುವ ಜಾತಿಸೂತಕ, ಕರ್ಮಸೂತಕವನ್ನು ಕಿತ್ತಿ ಅವರೆಲ್ಲರನ್ನು ಒಂದುಮಾಡಲು ಹೋರಟ ಶರಣ ಪರಂಪರೆಯನ್ನು ನೆನೆಯುತ್ತಾ  ಕುವೆಂಪುರವರ ರಾಮಾಯಣ ದರ್ಶನಂ ಹಾಗೂ ಶಿವರಾಮ ಕಾರಂತರ ಚೋಮ ಹಾಗೂ ಪ್ರಕೃತಿ ಸಂಬಂದಗಳ ಕಲ್ಪನಾ ಸ್ವರೂಪ ಸಾರವು ಬೇಂದ್ರೆಯವರ ಬೃಂಗದ ಬೆನ್ನೇರಿ ಬಂತು ಹಾಗೂ ವರ್ಗಅಸಮಾನತೆ, ಧರ್ಮದ ಹೆಸರಿನಲ್ಲಿ ನಡೆಯುವ ಡೊಂಗಿತನ ಸಾರುವ  ಜಾನಪದ ಹಾಗೂ ತತ್ವಪದದ ಕೇಲವು ಸಾಲುಗಳನ್ನು ಧ್ವನಿಪೂರ್ವಕವಾಗಿ ಇಲ್ಲಿ ನಿರೂಪಿಸಲಾಗಿದೆ. ಸ್ತ್ರೀ ಸಂಬಂದಗಳ ಕುರಿತು ಹೇಳುವ ಪ್ರತಿಭಾ ನಂದಕುಮಾರ ಹಾಗೂ ವೈದೇಹಿಯವರ ಕವನದ ಸಾಲುಗಳು ಇಲ್ಲಿ ಹೆಣ್ಣಿಣ ಶೋಷಣೆಯ ಮುಖಗಳನ್ನು ಅನಾವರಣ ಮಾಡಿದೆ. ದೇವನೂರರ ಒಡಲಾಳ ಸಿದ್ದಲಿಂಗಯ್ಯನವರ ನೆನ್ನೆ ದಿನ ನನ್ನ ಜನ  ಕವನಗಳು ಇವತ್ತೀನ ಶೋಷಣೆಯನ್ನು ಸಾರುತ್ತವೆ. ಕೊನೇಗೆ ಸು,ರಂ ಎಕ್ಕುಂಡಿಯವರ ಮೂಡಲ ದೀಪದೋಂದಿಗೆ ಕಾವ್ಯರಂಗ ಮುಕ್ತಾಯವಾಗುತ್ತದೆ. ಒಟ್ಟಾರೆಯಾಗಿ ಕಾವ್ಯರಂಗ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗು ಉಪನ್ನಾಸಕರಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ನಮ್ಮ ಕಾಲಾವಿದರಾದ ರಂಜಿತಾ ಜಾಧವ.ರೇಶ್ಮಾ ತಿಪಟೂರ. ಧೀರಜ್, ಯಲ್ಲಪ್ಪ ಗಾಣಗೇರ, ಚಿದಂಬರ ಕುಲಕರ್ಣಿ, ಮಹಾಂತೇಶ ದೊಡ್ಡಮನಿ, ಪ್ರಶಾಂತ, ವಿನಾಯಕ ಈಳಗೇರ , ಬಸವರಾಜ ಕಮ್ಮಾರ, ಕುಮಾರ ಬದಾಮಿ, ಚಂದ್ರು ಕಿಲ್ಲೇದಾರ, ಪ್ರಶಾಂತ ಒಳಗೊಂಡ 13 ಜನರ ಕಲಾತಂಡ ಎಲ್ಲರನ್ನು ಮಂತ್ರಮುಗ್ದರನ್ನಾಗಿಸುವ ಹಾಗೆ ಅಭಿನಯಿಸಿದರು. ಈ ಕಾವ್ಯ ರಂಗ ಯಶಸ್ವಿ ಹಿಂದೆ ನಿರ್ದೇಕರಾದ ಡಾ.ಶ್ರೀಪಾಧ ಬಟ್ ಹಾಗೂ ರಂಗಪಠ್ಯ ಸಿದ್ದಪಡಿಸಿದ ಡಾ.ಎಂ.ಜಿ ಹೆಗಡೆ ಯವರ ಶ್ರಮವಿದೆ. ಇವರೆಲ್ಲರ ಶ್ರಮ ಸಾರ್ಥಕಗೊಂಡದ್ದು ಈ ಸಮುದಾಯದ ಕಾವ್ಯರಂಗ ತಿರುಗಾಟದಿಂದ.
  ಈ ಕಾವ್ಯರಂಗ ಹಾವೇರಿ ಜಿಲ್ಲೆಯ ಶೇಷಗಿರಿಯಲ್ಲಿ 21-01-2017 ರಿಂದ 15 ದಿನಗಳ ಕಾಲ ಡಾ.ಶ್ರೀಪಾದ ಭಟ್ ರವರ ನಿರ್ದೇಶನದಲ್ಲಿ ತರಬೇತಿ ಹೊಂದಿ, ದಿನಾಂಕ; 03-02-2017 ರಂದು ಧಾರವಾಡದ ಕನ್ನಡ ಸಾಹಿತ್ಯಭವನದಲ್ಲಿ ಚಿದಂಬರರಾವ ಜಂಭೆಯವರಿಂದ ಯದ್ಘಾಟನೆಗೊಂಡು ಧಾರವಾಡ,ಬೆಳಗಾಂ,ಗದಗ ಜಿಲ್ಲೆಗಳ ಕಾಲೇಜುಗಳಲ್ಲಿ ಪ್ರದರ್ಶನ ನೀಡಿತ್ತಿದೆ.
ರಂಗ ಪಠ್ಯ: ಡಾ.ಎಂ.ಜಿ.ಹೆಗಡೆ; ವಿನ್ಯಾಸ: ದಾಮೋದರ ನಾಯ್ಕ, ಹೊನ್ನಾವರ; ನಿರ್ದೇಶನ: ಡಾ.ಶ್ರೀಪಾದ ಭಟ್ ಸಹ ನಿರ್ದೇಶನ;




   

Saturday 4 February 2017

ನಾರಾಯಣ ಗಾಂವಕಾರರಿಗೆ ದಿ. ದುರ್ಗಾದಾಸ ಗಂಗೊಳ್ಳಿ ಪ್ರಶಸ್ತಿ

ಕುಮಟಾದ ಕಲಾ ಗಂಗೋತ್ರಿ ಸಂಸ್ಥೆಯು ಯಕ್ಷಗಾನ ಕಲಾವಿದರಾದ ನಾರಾಯಣ ಗಾಂವಕಾರ ಇವರಿಗೆ ದಿ. ದುರ್ಗಾದಾಸ ಗಂಗೊಳ್ಳಿ ಪ್ರಶಸ್ತಿ ನೀಡಿ ಗೌರವಿಸಿತು. ಇದೇ ಸಂದರ್ಭದಲ್ಲಿ ಜಾನಪದ ಹಾಡುಗಾರ್ತಿ ಪದ್ಮಶ್ರಿ ಸುಕ್ರಿ ಗೌಡ, ಶ್ರೀ ಮುರೂರು ವಿಷ್ಣು ಭಟ್, ಡಾ ಎಂ ಆರ್ ನಾಯಕರನ್ನು ಇದೇ ವೇದಿಕೆಯಲ್ಲಿ ಸಮ್ಮಾನಿಸಲಾಯಿತು.


ಬಡಾಬಡಗಿನ ಯಕ್ಷಗಾನ ಪರಂಪರೆಯಲ್ಲಿ ಡೇರೆಮೇಳಗಳ ಕಲಾವಿದರಷ್ಟೇ ಜನಪ್ರಿಯರಾದ ಅನೇಕ ಹವ್ಯಾಸಿ ಮತ್ತು ಬಯಲಾಟದ ಕಲಾವಿದರಿದ್ದಾರೆ. ಪಡುವಣಿಯ ನಾರಾಯಣ ಗಾಂವಕಾರರು ಅಂತಹ ಕಲಾವಿದರಲ್ಲೊಬ್ಬರು. ಅನಾರೋಗ್ಯದ ಕಾರಣದಿಂದಾಗಿ ತಮ್ಮ ಹವ್ಯಾಸವನ್ನು ಐವತ್ತೈದರ ಹರೆಯದಲ್ಲೇ ನಿಲ್ಲಿಸಿದರೂ ಅವರ ಎರಡು ದಶಕಗಳ ಕಾಲದ ಯಕ್ಷಗಾನದ ಸೇವೆ ಅನುಪಮವಾದದ್ದು. ತಮ್ಮ ಕಾಲದಲ್ಲಿ ಉತ್ತರ ಕನ್ನಡದ ಉದ್ದಗಲಗಳಲ್ಲಿ ವಿಶಿಷ್ಟ ಪಾತ್ರಾಭಿನಯ ಮತ್ತು ಅರ್ಥಗಾರಿಕೆಗಾಗಿ ಹೆಸರಾಗಿದ್ದ ನಾರಾಯಣ ಗಾಂವಕಾರರು ಮಾರುತಿ ಪ್ರತಾಪ ಪ್ರಸಂಗದ ಹನುಮಂತ, ಕಚದೇವಯಾನಿ ಪ್ರಸಂಗದ ಶುಕ್ರಾಚಾರ್ಯ ಪಾತ್ರಗಳ ಮಟ್ಟಿಗಂತೂ `ಇವರೇ ಸೈ’ ಎಂಬಷ್ಟು ಜನಪ್ರಿಯರು.

ಉತ್ತರ ಕನ್ನಡದ ಕುಮಟಾ ತಾಲೂಕಿನ ಪಡುವಣಿ ಇವರ ಹುಟ್ಟೂರು. ಅನಂತ ಗಾಂವಕಾರ
ಮತ್ತು ಸಣ್ಣಮ್ಮ ಗಾಂವಕಾರರ ಮಗನಾಗಿ 1940 ರ ಮೇ 10 ನೇ ತಾರೀಕಿನಂದು ಜನಸಿದ ಗಾಂವಕಾರರು ಮೆಟ್ರಿಕ್ ವರೆಗಿನ ಶಿಕ್ಷಣವನ್ನು ಹೆಗೆಡೆಯಲ್ಲಿ ಪಡೆದವರು. ಯಕ್ಷಗಾನದ ಹುಚ್ಚು ಓದನ್ನು ಮುಂದುವರಿಸಲು ಅವಕಾಶವನ್ನೇ ನೀಡದಾಗ ತನ್ನ ಹದಿನಾಲ್ಕನೇ ವಯಸ್ಸಿನಲ್ಲಿಯೇ ಗೆಜ್ಜೆ ಕಟ್ಟಿ ಅಭಿಮನ್ಯುವಿನ ಪಾತ್ರದ ಮೂಲಕ ರಂಗದ ಮೇಲೆ ಹೆಜ್ಜೆ ಹಾಕಿದರು. ಆಗಿನ ಹೆಸರಾಂತ ಭಾಗವತರಾದ ಬಾಡದ ಶಿವರಾಮ ಹೆಗಡೆಯವರು ಮತ್ತು ಪಡುವಣಿ ಪರಮಯ್ಯ ಪಟಗಾರರರನ್ನು ಇವರು ತನ್ನ ಯಕ್ಷಗುರುಗಳೆಂದು ನೆನಪುಮಾಡಿಕೊಳ್ಳುತ್ತಾರೆ. ಚಿಕ್ಕ ಪ್ರಾಯದಲ್ಲೇ ಯಕ್ಷಗಾನಕ್ಕೆ ಮನಸೋತು, ಎಲ್ಲ ಬಗೆಯ ಪಾತ್ರಗಳನ್ನು ಮಾಡುತ್ತಾ ಹಂತ-ಹಂತವಾಗಿ ಮೇಲೇರಿ, ಎರಡನೇ ವೇಷದಾರಿಯಾಗಿ ರಸಿಕರ ಮನದಲ್ಲಿ ಅಚ್ಚಳಿಯದೆ ಉಳಿದವರು. ರಂಗದಿಂದ ನಿವೃತ್ತಿ ಪಡೆದು ಎರಡುದಶಕಗಳೇ ಕಳೆದರೂ ಊರೂರುಗಳಲ್ಲಿ ಇವರ ಪಾತ್ರವನ್ನು ಕಣ್ಣೆದರು ತಂದುಕೊಂಡು ಪರವಶರಾಗುವ ಅಭಿಮಾನಿಗಳಿದ್ದಾರೆ. ತನ್ನ ಪಾತ್ರವನ್ನು ರೂಪಿಸುತ್ತಾ ಒಂದು ಸಂಘಟಿತ ಆಖ್ಯಾನದ ಪ್ರದರ್ಶನಕ್ಕೆ ಪೋಷಣೆ ನೀಡುವುದು ಯಕ್ಷಗಾನಕ್ಕೇ ವಿಶಿಷ್ಟವಾದ ಪರಂಪರೆ. ನಾರಾಯಣ ಗಾಂವಕಾರರು ಈ ಅಲಿಖಿತ ನಿಯಮವನ್ನು ಮೀರಿದವರಲ್ಲ. ಹವ್ಯಾಸಿ ಮೇಳಗಳಲ್ಲಿಯೇ ತಮ್ಮ ಸೇವೆಯನ್ನು ಪೂರ್ಣಗೊಳಿದವರಾಗಿದ್ದರೂ ಪ್ರೇಕ್ಷಕ ವರ್ಗ ಯಾವುದೇ ಆಗಿದ್ದರೂ ಪ್ರಾಮಾಣಿಕ ಪ್ರದರ್ಶನ ನೀಡುವ ಶೃದ್ಧೆ ಮತ್ತು ಬದ್ಧತೆಯಲ್ಲಿ ಇವರದು ಪಕ್ಕಾ ವೃತ್ತಿಪರ ನಿಲುವು. ಚಿಕ್ಕ ಹಳ್ಳಿಗಳಲ್ಲಿಯೇ ಇರಲಿ ನಗರದ ದೊಡ್ಡ ಸಭಾಂಗಣಗಳವೇ ಆಗಿರಲಿ ನೂರಕ್ಕ ನೂರಷ್ಟು ತಮ್ಮ ಸಾಮರ್ಥ್ಯಕ್ಕೆ ತಕ್ಕಂತಹ ಪ್ರದರ್ಶನವನ್ನು ನೀಡುವುದಕ್ಕೆ ನಾರಾಯಣ ಗಾಂವಕಾರರು ಸದಾ ಬದ್ಧರಾಗಿದ್ದರು. ಪಾತ್ರ ಬೀಳಾಗದಂತೆ ಸದಾ ಎಚ್ಚರದಲ್ಲಿರುವವರು. ಇವರ ಪಾತ್ರಗಳಲ್ಲೇ `ಹನುಮಂತ’ ನ ಪಾತ್ರ ಅನನ್ಯವಾದದ್ದು. ತನ್ನ ಯಕ್ಷಸೇವೆಯ ಆರಂಭದ ದಿನಗಳಲ್ಲೇ ಇಂದ್ರಜೀತು ಕಾಳಗದಲ್ಲಿ ಮೂರೂರು ದೇವರು ಹೆಗಡೆಯವರ ಇಂದ್ರಜಿತುವಿನ ಎದುರು ಹನುಮಂತನಾಗಿ ಹತ್ತಾರು ಕಡೆ ಪಾತ್ರವಹಿಸಿ ಹನುಮಂತನ ಪಾತ್ರಕ್ಕೆ ಅನನ್ಯವಾದ ಆಯಾಮವನ್ನು ಒದಗಿಸಿದವರು. ಆನಂತರ, ಇವರು ನೂರಾರು ರಂಗಸ್ಥಳಗಳ ಮೇಲೆ ಹನುಮಂತನಾಗಿ ಮೆರೆದವರು. ವಾಚಿಕ, ಆಹಾರ್ಯ, ಆಂಗಿಕ ಹಾಗೂ ಸಾತ್ವಿಕ ಅಭಿನಯಗಳಲ್ಲಿ ಇವರು ಸಮಾನ ಸಿದ್ಧಿಯನ್ನು ಸಾಧಿಸಿದವರು. ಇವರ ಅಭಿನಯ ನಿಜವಾದ ರಸೋಲ್ಲಾಸವೇ ಆಗಿರುತಿತ್ತು. ಉತ್ತಮ ನಾಯ್ಕರ ಮೇಳವೆಂದೇ ಪ್ರಸಿದ್ಧವಾಗಿದ್ದ ಕುಮಟಾದ ಶಾಂತಿಕಾ ಪರಮೇಶ್ವರಿ ಯಕ್ಷಗಾನ ಮಂಡಳಿ ಇಬ್ಬರು ಶ್ರೇಷ್ಠ ಹನುಮಂತನ ಪಾತ್ರದಾರಿಗಳನ್ನು ಒಂದೇ ಕಾಲಗಟ್ಟದಲ್ಲಿ ನೀಡಿದೆ. ಒಬ್ಬರು ಕುಮಟಾ ಗೋವಿಂದ ನಾಯ್ಕರಾದರೆ ಇನ್ನೊಬ್ಬರು ಪಡುವಣಿ ನಾರಾಯಣ ಗಾಂವಕಾರರು. ವೇಷಕಟ್ಟಿಕೊಳ್ಳುವಲ್ಲಿ ತೋರುವ ಶ್ರದ್ಧೆ, ಮುಖವರ್ಣಿಕೆಯಲ್ಲಿನ ಅಚ್ಚುಕಟ್ಟುತನ ಮತ್ತು ಕಲಾತ್ಮಕತೆ ಮತ್ತು ಹನುಮಂತನ ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡುವ ಕಾರಣಕ್ಕಾಗಿ ನಾರಾಯಣ ಗಾಂವಕಾರರು ಬಡಗುತಿಟ್ಟು ಯಕ್ಷಗಾನ ಪ್ರಪಂಚದ ಸಾರ್ವಕಾಲಿಕ ಶ್ರೇಷ್ಟ ಹನುಮಂತನ ಪಾತ್ರದಾರಿಗಳ ಸಾಲಿನಲ್ಲಿ ನಿಲ್ಲುವವರು. ಯಕ್ಷರಂಗದ ದಂತಕತೆ ಎಕ್ಟರ್ ಜೋಷಿಯವರ ಭೂಕೈಲಾಸದಲ್ಲಿ ರಾವಣನ ಪಾತ್ರ ಮಾಡುತ್ತಿದ್ದರೆ ನಾರಾಯಣ ಗಾಂವಕಾರರದು ಈಶ್ವರನ ಪಾತ್ರ. ಈ ಜೋಡಿಯ ಜನಪ್ರೀಯತೆ ಅವರನ್ನು ಗೋವಾ ಮತ್ತು ಮುಂಬೈಗಳಲ್ಲಿಯೂ ಪ್ರದರ್ಶನ ನೀಡುವ ಅವಕಾಶವನ್ನು ನೀಡಿತು. ಕೆರೆಮನೆ ಮಹಾಬಲ ಹೆಗೆಡೆಯವರ ಸುದನ್ವ ಪಾತ್ರಕ್ಕೆ ಎದುರಾಗಿ ಅರ್ಜುನನಾಗಿ, ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಭಸ್ಮಾಸುರನ ಪಾತ್ರಕ್ಕೆ ಎದುರಾಗಿ ರಾವಣನಾಗಿ ಹೀಗೆ ಆಗಿನ ಪ್ರಸಿದ್ಧ ಕಲಾವಿದರೊಂದಿಗೆ ಪಾತ್ರ ಮಾಡಿ ಮೆಚ್ಚುಗೆ ಗಳಿಸಿದವರು.
ಕಚ-ದೇವಯಾನಿ ಪ್ರಸಂಗದಲ್ಲಿ ನಾರಾಯಣ ಗಾಂವಕಾರರು ಶುಕ್ರಾಚಾರ್ಯನಾಗಿ ಕಚನಾಗಿ ಧಾರೇಶ್ವರ ಮಾಸ್ತರರು ಮತ್ತು ದೇವಯಾನಿಯಾಗಿ ಪಾಲನಕರ ಮಾಸ್ತರರು ಇರಲೇಬೇಕೆಂಬ ಸಹೃದಯರ ಒತ್ತಾಯ ಆ ಕಾಲದ ಅಲಿಖಿತ ನಿಯಮವಾಗಿ ಚಾಲ್ತಿಯಲ್ಲಿದ್ದುದು ಅವರ ಜನಪ್ರಿಯತೆಗೆ ಸಾಕ್ಷಿ. ಅನಾರೋಗ್ಯದಿಂದಾಗಿ ತಮ್ಮ ಐವತ್ತರ ಹರೆಯದಲ್ಲೇ ವೇಷ ಹಚ್ಚುವುದನ್ನು ನಿಲ್ಲಿಸಿ ತಾಳಮದ್ದಳೆಯಲ್ಲಿ ತಮ್ಮ ವ್ಯವಸಾಯವನ್ನು ಮುಂದುವರಿಸಿದರು. ಅರ್ಥಗಾರಿಕೆಯಲ್ಲೂ ಇವರು ತಮ್ಮ ಛಾಪನ್ನು ಮೂಡಿಸಿದರು. ಕರ್ಕಿಯ ಹಾಸ್ಯಗಾರ ಮೇಳ, ಹಳದೀಪುರದ ಜೋಗನಕಟ್ಟೆ ಮೇಳ, ಕುಮಟಾದ ಶ್ರೀ ರಾಮನಾಥ ಯಕ್ಷಗಾನ ಮಂಡಳಿ, ಹೆಗಡೆಯ ಶ್ರೀ ಶಾಂತಿಕಾ ಪರಮೇಶ್ವರಿ ಯಕ್ಷಗಾನ ಮಂಡಳಿ ಮುಂತಾದ ಬಯಲಾಟದ ಮೇಳಗಳಲ್ಲಿ ಪಾತ್ರವಹಿಸಿ ಜಿಲ್ಲೆಯ ಹಿರಿ-ಕಿರಿಯ ಯಕ್ಷಗಾನ ಕಲಾವಿದರೊಂದಿಗೆ ಒಡನಾಟಹೊಂದಿದವರು. ಮೂರೂರು ದೇವರ ಹೆಗಡೆ, ಎಕ್ಟರ್ ಜೋಷಿ ಮತ್ತು ವೀರಭದ್ರನಾಯ್ಕರ ಪಾತ್ರಗಳಿಂದ ಪ್ರಭಾವಿತರಾಗಿದ್ದ ನಾರಾಯಣ ಗಾಂವಕಾರರು ಕಡತೋಕ ಮಂಜು ಭಾಗವತರು, ಕೊಪ್ಪಲಮಕ್ಕಿ ಭಾಗವತರು, ಬಾಡದ ಶಿವರಾಮ ಹೆಗಡೆಯವರಂತಹ ಶ್ರೇಷ್ಟರ ತಾಳಕ್ಕೆ ಹೆಜ್ಜೆಹಾಕಿದವರು. ದೇವರು ಹೆಗಡೆಯವರು, ಕೊಂಡದಕುಳಿ ರಾಮ ಹೆಗಡೆ (ಸೀನಿಯರ್) ಅಗ್ರಗೋಣ ಎಂ. ಎಂ ನಾಯಕ, ಹಿರೇಗುತ್ತಿ ವೆಂಕಟ್ರಮಣ ನಾಯಕರಂತಹ ಮೇರುಕಲಾವಿದರ ಮಾರ್ಗದರ್ಶನ ಪಡೆದು ತನ್ನದೇ ದಾರಿಯನ್ನು ಗುರುತಿಸಿಕೊಂಡವರು. ಕುಮಟಾ ಉತ್ತಮ ನಾಯ್ಕ್, ಕುಮಟಾ ಗೋವಿಂದ ನಾಯ್ಕ್ , ಗೋಕರ್ಣ ಹೊನ್ನಪ್ಪ ಗುನಗಾ , ಶಿವಾನಂದ ಭಂಡಾರಿ, ಅನಂತ ಹೆಗಡೆ ಹಾವಗೋಡಿ ಮುಂತಾದವರ ಜೊತೆಯಲ್ಲಿಯೇ ಹವ್ಯಾಸಿ ಮೇಳವಾಗಿ ಯಕ್ಷಗಾನವನ್ನು ಹಳ್ಳಿಗಳಲ್ಲಿ ಜೀವಂತವಾಗಿರಿಸಿದವರು. ನಾರಾಯಣ ಗಾಂವಕಾರರು ಯಾರನ್ನೂ ಅನುಸರಿಸಿದವರಲ್ಲ; ಅನುಕರಿಸಿದವರಲ್ಲ.
ಯಕ್ಷಗಾನದ ನೈಜ ಪ್ರದರ್ಶನ ನೀಡಿದವರಲ್ಲಿ ಇವರೊಬ್ಬರು. ತಮ್ಮ ಪಾತ್ರಗಳ ಮೂಲಕ ಪ್ರೇಕ್ಷಕರಲ್ಲಿ ನಾರಾಯಣ ಗಾಂವಕಾರರು ಹೊಮ್ಮಿಸಿದ ರಸಾನುಭವ ಅನಿರ್ವಚನೀಯ.